ಅಮ್ಮನಹಳ್ಳ ಹಾರನಹಳ್ಳಿ ಶ್ರೀ ದೂತರಾಯಸ್ವಾಮಿ | Dootharayaswamy | Shree Veerbhadraswamy | Cheluvarayaswamy

แชร์
ฝัง
  • เผยแพร่เมื่อ 3 ต.ค. 2024
  • ಅಮ್ಮನಹಳ್ಳ ಹಾರನಹಳ್ಳಿ ಶ್ರೀ ದೂತರಾಯಸ್ವಾಮಿ ಕತ್ತಿಸೇವೆ | Dootharayaswamy Kattiseve | Shree Veerbhadraswamy
    ಅಮ್ಮನಹಳ್ಳ ಹಾರನಹಳ್ಳಿ ಶ್ರೀ ದೂತರಾಯಸ್ವಾಮಿ ಕತ್ತಿಸೇವೆ | Dootharayaswamy Kattiseve | Shree Veerbhadraswamy
    Shree Dootharayaswamy Katthi Seve | Shree Kodammadevi Jatra Mahotsava | Haranahalli Kodimata| Hassan
    • ಆದಿಶಕ್ತಿ ಶ್ರೀ ಕೋಡಮ್ಮ ದ...
    • Shree Dootharayaswamy ...
    • Shree Dootharayaswamy ...
    • ಶ್ರೀ ಕರಿಬೀರೇಶ್ವರಸ್ವಾಮಿ...
    • ಶ್ರೀ ಕರಿಬೀರೇಶ್ವರಸ್ವಾಮಿ...
    • ಕೋಡಿಹಳ್ಳಿ ಶ್ರೀ ದೇವಮ್ಮ ...
    • ಕೋಡಿಹಳ್ಳಿ ಶ್ರೀ ದೇವಮ್ಮ ...
    • ಕೋಡಿಹಳ್ಳಿ ಶ್ರೀ ದೇವಮ್ಮ ...
    • ಕೋಡಿಹಳ್ಳಿ ಶ್ರೀ ದೇವಮ್ಮ ...
    • ಕೋಡಿಹಳ್ಳಿ ಶ್ರೀ ದೇವಮ್ಮ ...
    • ಶ್ರೀ ವೀರಭದ್ರಸ್ವಾಮಿ ಕುಣ...
    • ಶ್ರೀ ಧೂತರಾಯಸ್ವಾಮಿ ಕುಣಿ...
    • ಶ್ರೀ ವೀರಭದ್ರಸ್ವಾಮಿ ಕುಣ...
    • Shree Karibeereshwara ...
    • Shree Dootharayaswamy ...
    • ಶ್ರೀ ಚೆಲುವರಾಯಸ್ವಾಮಿ ಕು...
    • Thalaluru Shree Dootha...
    #Pradootha #Dootharayaswamy #Katthiseve
    #Veerabhadraswamy #ವೀರಭದ್ರಸ್ವಾಮಿ #ಧೂತರಾಯಸ್ವಾಮಿ
    ಈ ಚಾನಲ್ ಕರ್ನಾಟಕದಲ್ಲಿ ಪ್ರಚಲಿತದಲ್ಲಿರುವ ಜಾನಪದ ಕಲೆಗಳಾದ ಸೋಮನ ಕುಣಿತ, ಯಕ್ಷಗಾನ, ಭಜನೆ, ವೀರಗಾಸೆ, ಜನಪದ ವಾದ್ಯಗಳು, ಜನಪದ ಸಂಗೀತ ಕುರಿತಾಗಿದೆ.
    ಸೋಮನ ಕುಣಿತ
    ಕರ್ನಾಟಕದಲ್ಲಿ ಸಾಮಾನ್ಯವಾಗಿ ತುಮಕೂರು, ಚಿತ್ರದುರ್ಗ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಹು ಜನಪ್ರಿಯವಾಗಿರುವ ಸೋಮನ ಕುಣಿತ. ಈಗ ದೇಶ - ವಿದೇಶಗಳಲ್ಲೂ ಪ್ರದರ್ಶಿತವಾಗಿ ವಿಶ್ವದ ಜನರ ಗಮನ ಸೆಳೆದಿದೆ. ಬಣ್ಣ ಬಣ್ಣದ ವಸ್ತ್ರಗಳ ಅಲಂಕಾರದೊಂದಿಗೆ ರಾಕ್ಷಸನ ಮುಖವಾಡವನ್ನುಳ್ಳ ಸೋಮನ ಕುಣಿತ ದೇವೀ ಆರಾಧನೆಯ ಒಂದು ಅಂಗ. ದೇವಿಯನ್ನು ರಂಜಿಸಲು, ದೇವಿಯ ಮನಸ್ಸನ್ನು ಸಂತೋಷ ಪಡಿಸಲು ಸೋಮ ಕುಣಿಯುತ್ತಾನೆ ಎಂಬುದು ಗ್ರಾಮೀಣರ ನಂಬಿಕೆ.ಜಾನಪದ ಹಾಡು ಕುಣಿತ ನಮ್ಮ ಅನಕ್ಷರಸ್ಥ ಹಳ್ಳಿಗರ ಅಂತರಂಗ. ಅನುಭವವೆಂಬ ಗುರುವಿನಿಂದ ತಮ್ಮ ಸುತ್ತಲ ಪರಿಸರದಲ್ಲಿ ಪಾಠ ಕಲಿವ ಗ್ರಾಮೀಣರು ದೇವೀ ಆರಾಧನೆಗಾಗಿ ಹಲವು ಬಗೆಯ ಜಾನಪದ ನೃತ್ಯಗಳನ್ನು ಮಾಡುವುದುಂಟು. ಅವುಗಳಲ್ಲಿ ಒಂದಾದ ಸೋಮನ ಕುಣಿತ ಅತಿ ಸುಂದರ.
    ಪ್ರತೀತಿ
    ಸೋಮ ದೇವಿಯ ಅಂಗರಕ್ಷಕ, ದೇವಿಯ ಕಾವಲಿಗೆ ಕಾಲಭೈರವ (ರುದ್ರ ರೂಪಿ ಶಿವ) ನೇಮಿಸಿರುವ ಶಿವ ಗಣ. ರಾಕ್ಷಸ ರೂಪಿಯಾದ ಅಂಗರಕ್ಷಕ ಎಂದೂ ಗ್ರಾಮೀಣರು ಹೇಳುತ್ತಾರೆ. ಸೋಮನ ಹುಟ್ಟಿನ ಬಗ್ಗೆ ಹಲವಾರು ಕತೆಗಳಿವೆ. ಒಂದು ಕತೆಯಂತೆ ವಿವಾಹಿತ ಹೆಣ್ಣೊಬ್ಬಳು, ತನ್ನ ತವರಿನಿಂದ ಮಾವನ ಜತೆಯಲ್ಲಿ ಗಂಡನ ಮನೆಗೆ ಹೊರಟಿದ್ದಳಂತೆ. ಸುದೀರ್ಘ ಪ್ರಯಾಣದಲ್ಲಿ ಮಾರ್ಗಮಧ್ಯೆ ಆಕೆಗೆ ಜಲಬಾಧೆ ಕಾಣಿಸಿಕೊಂಡಿತಂತೆ. ಎತ್ತಿನ ಗಾಡಿಯನ್ನು ನಿಲ್ಲಿಸಿ ಆಕೆ ತಾನು ಮೂತ್ರ ವಿಸರ್ಜಿಸಿ ಬರುವುದಾಗಿ ಅಲ್ಲಿಯವರೆಗೆ ಹಿಂತಿರುಗಿ ನೋಡದೇ ನಿಂತಿರುವಂತೆ ತಂದೆಯ ಸಮಾನನಾದ ಮಾವನಿಗೆ ತಿಳಿಸಿ ಹುತ್ತವೊಂದರ ಹಿಂದೆ ಹೋದಳಂತೆ. ಅತ್ತ ಮುಖ ಮಾಡಿ ನಿಂತಿದ್ದ ಮಾವ ತನ್ನ ಸ್ಥಾನವೇನೆಂಬುದನ್ನೂ ಮರೆತು ಹಿಂತಿರುಗಿ ನೋಡಿದನಂತೆ. ಇದರಿಂದ ಲಜ್ಜಿತಳೂ, ಅವಮಾನಿತಳೂ ಆದ ಆ ಹೆಣ್ಣು, ಹುತ್ತದ ಕೋವಿಯನ್ನು ಪ್ರವೇಶಿಸಿದಳಂತೆ. ಮಾವ ನೋಡು ನೋಡುತ್ತಿದ್ದಂತೆಯೇ ಆಕೆ ಹುತ್ತದಿಂದ ದೇವತೆಯಾಗಿ ಹೊರ ಬಂದಳು. ದೇವತೆಯಾಗಿ ಹೊರ ಬಂದ ಸೊಸೆಯ ಸಂಗಡ ಇಬ್ಬರು ದೈತ್ಯರೂ ಇದ್ದರು. ಅವರೇ ದೇವಿಯ ಅಂಗರಕ್ಷಕರಾದ ಸೋಮರು. ಈ ಅಂಗರಕ್ಷಕರು, ಪುತ್ರಿ ಸಮಾನಳಾದ ಸೊಸೆಯನ್ನು ಕಾಮುಕ ದೃಷ್ಟಿಯಿಂದ ನೋಡಿದ ಮಾವನನ್ನು ವಧಿಸಿದರು ಎಂಬ ಕತೆ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನಲ್ಲಿ ಪ್ರಚಲಿತ.
    ತುರುವೇಕೆರೆಯ ಗ್ರಾಮದೇವತೆ ಉಡುಸುಲಮ್ಮನ ದೇವಾಲಯದಲ್ಲಿ ಕೂಡ ಸೋಮರು ಇದ್ದಾರೆ. ಊರ ದೇವಿಯ ಜಾತ್ರೆಯಲ್ಲಿ ಸೋಮನ ಕುಣಿತ ಹಾಗೂ ಸಿಡಿ ಕರ್ನಾಟಕದ ಜನರನ್ನು ತನ್ನತ್ತ ಆಕರ್ಷಿಸಿದೆ. ಸಾಮಾನ್ಯವಾಗಿ ಗ್ರಾಮದೇವತೆಯ ಬಳಿ ಇಬ್ಬರು ಸೋಮರು ಇರುತ್ತಾರೆ. ಒಂದು ಕೆಂಪು ಬಣ್ಣದ ಸೋಮ. ಮತ್ತೊಂದು ಹಳದಿ ಸೋಮ. ಕೆಂಪು ಸೋಮನನ್ನು ಕೆಂಪರಾಯನೆಂದೂ, ಹಳದಿ ಸೋಮನನ್ನು ಕೆಂಚರಾಯನೆಂದೂ ಕರೆಯುತ್ತಾರೆ.
    ಹೆಣ್ಣಿಗ ಕೆಂಚರಾಯ : ನಮ್ಮ ಗ್ರಾಮೀಣ ಮಹಿಳೆಯರಿಗೆ ಒಡವೆ ವಸ್ತುವಿಗಿಂತ,ಕಪ್ಪು ಬಟ್ಟು ಹರಿಶಿನ ಕುಂಕುಮವೇ ಮಿಗಿಲು. ಸುಮಂಗಲೆಯರು ಹರಿಶಿನವನ್ನು ನಿತ್ಯವೂ ತಮ್ಮ ಮುಖಕ್ಕೆ ಹಚ್ಚಿಕೊಳ್ಳುತ್ತಾರೆ. ಹೀಗಾಗಿ ಹಳದಿ ಬಣ್ಣದ ಸೋಮ ಹೆಣ್ಣು ಎಂಬುದು ಗ್ರಾಮೀಣರ ನಂಬಿಕೆ. ಕೆಂಪು ಬಣ್ಣದ ಸೋಮ ಗಂಡಸು. ಕೆಲವೆಡೆ ಸೋಮರನ್ನು ಈರಣ್ಣ, ಪಾಪಣ್ಣ, ಕಪ್ಪಣ್ಣ, ಗುಳ್ಳಣ್ಣ ಎಂದೆಲ್ಲಾ ಕರೆಯುತ್ತಾರೆ. ಕಪ್ಪು ಬಣ್ಣದ ಸೋಮನನ್ನು ಕಪ್ಪಣ್ಣ ಅಥವಾ ಕಾಲ ಎಂದೂ ಹೇಳುವವರುಂಟು.
    ಆಚರಣೆ
    ಗ್ರಾಮೀಣರು ದೇವವೃಕ್ಷ ಎಂದು ತಿಳಿದಿರುವ ಭೂತಾಳೆ ಮರವನ್ನು ಕತ್ತರಿಸಿ ತಂದು ಅದರಿಂದ ಸೋಮರನ್ನು ತಯಾರಿಸುತ್ತಾರೆ. ರಾಕ್ಷಸನಂತೆ ಮುಖವಾಡವನ್ನು ಮಾಡಿ, ಮಧ್ಯೆ ಮನುಷ್ಯನ ತಲೆ ಹಿಡಿಯುವಷ್ಟು ರಂದ್ರ ಕೊರೆದು, ಕಣ್ಣುಗಳ ಭಾಗಕ್ಕೆ ತೂತು ಮಾಡಿ, ಅದಕ್ಕೆ ಬಣ್ಣ ಬಳಿದು, ಪ್ರಭಾವಳಿ ನಿರ್ಮಿಸಿ, ಬಣ್ಣಬಣ್ಣದ ಸೀರೆಗಳಿಂದ ಅಲಂಕರಿಸಿ, ಹೂವಿನ ಹಾರ ಹಾಕಿ ಸೋಮರನ್ನು ಸಿದ್ಧಗೊಳಿಸುತ್ತಾರೆ. ಸೋಮನನ್ನು ಹೊತ್ತವರಿಗೆ ಉಸಿರಾಡಲು ಅನುವಾಗುವಂತೆ ಮೂಗಿನ ಹೊಳ್ಳೆಗಳಿಗೆ ರಂಧ್ರವನ್ನೂ ಕೊರೆಯಲಾಗುತ್ತದೆ.
    ಸಾಮಾನ್ಯವಾಗಿ ದೇವೀಗುಡಿಯ ಅರ್ಚಕರು ಅಥವಾ ಅವರ ವಂಶಸ್ಥರೇ ಸೋಮವನ್ನು ಹೊರುವುದು ವಾಡಿಕೆ. ಸೋಮನ ಸುತ್ತಾ, ಪದಗಾರರು, ಅರೆ ವಾದ್ಯಗಾರರು ತಾಳ ಮದ್ದಳೆಯವರು ಹಾಡುವ ಹಾಡಿಗೆ, ತಾಳಕ್ಕೆ ತಕ್ಕಂತೆ ಸೋಮ ಹೆಜ್ಜೆ ಹಾಕುತ್ತಾ ಕುಣಿಯುತ್ತಾನೆ.
    ಎಲ್ಲ ಊರುಗಳಲ್ಲೂ ಕೂಡ ಸೋಮ ಮೊದಲು ದೇವಸ್ಥಾನದ ಎದುರು ಕುಣಿದು, ದೇವಿಯನ್ನು ಸಂತೋಷಗೊಳಿಸಿ, ನಂತರ ನಗರ ಪ್ರದಕ್ಷಿಣೆಗೆ ಹೊರಡುತ್ತಾನೆ. ಊರಿನ ಜನರಿಗೆ ತಾನು ದೇವಿಯ ರಕ್ಷಣೆಗೆ ಇರುವುದಾಗಿ ಸಾರುವುದು ಹಾಗೂ ಜನರು ಪಾಪಕಾರ್ಯ ಮಾಡದಂತೆ ಎಚ್ಚರ ಮೂಡಿಸುವುದೇ ಈ ಪ್ರದಕ್ಷಿಣೆಯ ಹಿಂದಿನ ಉದ್ದೇಶ. ಮನಸ್ಸಿಗೆ ಮುದಕೊಡುವ ಹಾಗೂ ದೇವೀ ಆರಾಧನೆಯ ಈ ಸುಂದರ ಕುಣಿತ, ಗ್ರಾಮೀಣರ ನಾಟ್ಯಕಲೆ.
    ಇತರ ಊರುಗಳಲ್ಲಿ ಕೂಡ ಬೇರೆ ಊರಿನ ಸೋಮರನ್ನು ಕರೆಸಿ ನೃತ್ಯ ಮಾಡಿಸುವುದುಂಟು. ಇಂತಹ ಸಂದರ್ಭಗಳಲ್ಲಿ ಸೋಮ ತನ್ನ ಮೂಲ ದೇವಿಯ ಅಪ್ಪಣೆ ಪಡೆದೇ ಆ ಊರಿಗೆ ಹೋಗುತ್ತಾನಂತೆ. ಸಾಮಾನ್ಯವಾಗಿ ದೀಕ್ಷೆ ಪಡೆದ ಮಂದಿ ಮಾತ್ರ ಕಾಲಿಗೆ ಗೆಜ್ಜೆ ಕಟ್ಟಿ ಸೋಮನನ್ನು ಹೊರುವುದು. ಸೋಮನ ಹೊರುವ ಮಂದಿ ಮೊದಲು ಶುಚಿರ್ಭೂತರಾಗಿ, ಉದ್ದನೆಯ ಲಂಗ ತೊಟ್ಟು, ತಿಲಕವಿಟ್ಟು ಸೋಮರನ್ನು ಹೊರುತ್ತಾರೆ.

ความคิดเห็น •